ನವದೆಹಲಿ : ಕುಡಿದ ಮತ್ತಿನಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ವೇಗವಾಗಿ ಕಾರು ಚಲಾಯಿಸಿ ವೃದ್ಧ ಮಹಿಳೆಯ ಮೇಲೆ ಹರಿಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ನಗರದಲ್ಲಿ ನಡೆದಿದೆ.

ಆರೋಪಿ ಸಬ್ ಇನ್ಸ್ ಪೆಕ್ಟರ್ ಯೋಗೇಂದ್ರ ನನ್ನು ಸದ್ಯ ಬಂಧಿಸಲಾಗಿದೆ. ಪೂರ್ವ ದೆಹಲಿಯ ಘಾಜಿಪುರ ಪ್ರದೇಶದ ಚಿಲ್ಲಾ ಗ್ರಾಮದಲ್ಲಿ ನಿನ್ನೆ ಈ ಘಟನೆ ನಡೆದಿದೆ. ರಸ್ತೆಯಲ್ಲಿ ಮದ್ಯಪಾನ ಮಾಡಿ ಸಬ್ ಇನ್ಸ್ ಪೆಕ್ಟರ್ ವೇಗವಾಗಿ ಕಾರು ಚಲಾಯಿಸಿಕೊಂಡು ಹೋಗುತ್ತಿರುವಾಗ ರಸ್ತೆ ಬದಿ ಮಹಿಳೆ ನಡೆದುಕೊಂಡು ಹೋಗುತ್ತಿದ್ದರು. ಚಾಲನೆಯಲ್ಲಿ ನಿಯಂತ್ರಣ ತಪ್ಪಿ ಅಡ್ಡಾದಿಡ್ಡಿ ಚಲಾಯಿಸಿ ಮಹಿಳೆಯ ಮೇಲೆ ಹರಿಸಿದ್ದಲ್ಲದೆ ಕಾರಿನಡಿ ಮಹಿಳೆ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಗೊತ್ತಾದಾಗ ತಪ್ಪಿಸಿಕೊಂಡು ಹೋಗಲು ಸಬ್ ಇನ್ಸ್ ಪೆಕ್ಟರ್ ಯತ್ನಿಸಿದ್ದಾನೆ.

ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದರ ಸಹಾಯದಿಂದ ಆರೋಪಿ ಸಬ್ ಇನ್ಸ್ ಪೆಕ್ಟರ್ ನನ್ನು ಬಂಧಿಸಲಾಗಿದೆ. ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮದ್ಯಪಾನ ಮಾಡಿ ಮಹಿಳೆ ಮೇಲೆ ಕಾರು ಚಲಾಯಿಸಿ ಜೀವಕ್ಕೆ ಕುತ್ತು ತಂದ ಸಬ್ ಇನ್ಸ್ ಪೆಕ್ಟರ್ ಯೋಗೇಂದ್ರ ವಿರುದ್ಧ ಕೇಸು ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಹಿರಿಯ ಅಭಿಮಾನಿ ಭೇಟಿ ಮಾಡಿ ಭಾವುಕರಾದ ಅಪ್ಪು!

ಕಾರವಾರ : ತಮ್ಮ ನೆಚ್ಚಿನ ನಾಯಕ ನಟನಿಗಾಗಿ ಹಿರಿಯ ಜೀವವೊಂದು ಬರೋಬ್ಬರಿ 12 ವರ್ಷಗಳಿಂದ ಕಾಯುತ್ತಿತ್ತು. ಕೊನೆಗೂ ಶಬರಿಗೆ, ಅಯ್ಯಪ್ಪನ ದರ್ಶನವಾದಂತೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕುಮಾರ್ ತಮ್ಮ ಅಭಿಮಾನಿಗೆ ಭೇಟಿಯಾಗಿದ್ದಾರೆ.

ಜಿಲ್ಲೆಯಲ್ಲಿ ಮೂವರಿಗೆ ಸೋಂಕು ದೃಢ

ಜಿಲ್ಲೆಯಲ್ಲಿ ಶುಕ್ರವಾರ ಮೂರು ಕೊರೊನಾ ಪಾಸಿಟಿವ್ ಸೋಂಕಿತರು ಪತ್ತೆಯಾಗಿದ್ದು, ನಾಲ್ವರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ರೋಣದಲ್ಲಿ ಹೋರಾಟದ ವೇಳೆ ಹೆಜ್ಜೇನು ದಾಳಿ

ಆಸರೆ ಮನೆಗಳ ಹಕ್ಕು ಪತ್ರಕ್ಕಾಗಿ ಹೋರಾಟ ಮಾಡುತ್ತಿರುವ ವೇಳೆ ಹೆಜ್ಜೇನು ಹುಳುಗಳ ದಾಳಿ ಮಾಡಿದ ಘಟನೆ ನಡೆದಿದೆ.

ನಾಳೆ ಗಾಂಧಿ ಸ್ಮರಣೆ

ವಿಶ್ವವಿದ್ಯಾಲಯದಗಾಂಧಿ ಸಬರಮತಿ ಆಶ್ರಮದಲ್ಲಿ ಜ.30 ರಂದು ಮಹಾತ್ಮ ಗಾಂಧೀಜಿ ಅವರ ಪುಣ್ಯಸ್ಮರಣೆಯ ಅಂಗವಾಗಿ ಗಾಂಧಿ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.